09 August 2012

ವೇಣುಲೋಲನ ನಮಿಸುತ್ತಾ...



ಆ ಮುರಲಿಯಲ್ಲದೇನು ಮೋಡಿಯಿಹುದೋ...
ಆ ವೇಣುಗಾನದ ನಾದವದೇನು ಮಾಯೆ ಮಾಡಿಹುದೋ...
ಆ ಕೊಳಲ ಕೊರಳಲ್ಲದ್ಯಾವ ಕೋಗಿಲೆಯಿಹುದೋ...
ಅದ ಕೇಳುತ್ತಿದ್ದರೆ ಮನವಿದು ಮಿಡಿಯದಿರದು...
ಎದ್ದೆದ್ದುಬರುವ ತಲ್ಲಣಗಳೆಲ್ಲ ಅಲ್ಲೇ ಸ್ತಬ್ಧವಾಗಿಬಿಡುವವು...
ಇಂತಿರಲು,
ಆ ಅಸದಳ ನಾದದೊಡೆಯ ಶ್ರೀಕೃಷ್ಣನ ಸಾನ್ನಿಧ್ಯ ಇನ್ನೆಷ್ಟು ಹಿತವಿರಬಹುದು...
ಅವನೊಲುಮೆಯ ಕೃಪಾಕಟಾಕ್ಷದ ಮುಂದೆ ಕಷ್ಟಗಳೆಲ್ಲ ಕರಗಿಹೋದಾವು...
ಸಮ್ಮೋಹನಗೊಳಿಸುವ ಮೋಹನಗಾನಪ್ರಿಯನ ಈ ಜನುಮದಿನ...
ವಿನೀತರಾಗಿ ಆತನ ಆಶೀರ್ವಾದ ಬೇಡೋಣ...