16 February 2010

ಜೀವವೆಂಬುಡುಗೊರೆ....



ನಾವೆಲ್ಲ ನಮ್ ಸ್ನೇಹಿತ್ರು, ಬಂಧುಗಳು, ಆತ್ಮೀಯರು ಕೊಟ್ಟ ಉಡುಗೊರೆಗಳನ್ನು ಎಷ್ಟು ಜೋಪಾನವಾಗಿ ಎತ್ತಿಡ್ತೇವೆ! ಅವರೊಂದಿಗಿನ ಸವಿಸವಿನೆನಪುಗಳು ಆ ವಸ್ತುಗಳಿಗೊಂದು ವಿಶೇಷ ಸ್ಥಾನ ನೀಡಿರ್ತವೆ. ಕೆಲವನ್ನಂತೂ ತೀರಾ ಹಚ್ಕೊಂಡಿರ್ತೇವೆ. ಅದು ಎಲ್ಲಾದ್ರೂ ಕಳೆದು ಹೋದ್ರೆ ಏನೋ ಒಂಥರಾ ಕಸಿವಿಸಿ, ಚಡಪಡಿಕೆ. ಛೆ ಕಳ್ಕೊಂಡುಬಿಟ್ನಲ್ಲಾ ಅಂತ ಬೇಜಾರು. ಆ ವಸ್ತುವಿಗೆ ಅಂಥಾ ಬೆಲೆಯೇನೂ ಇಲ್ದಿದ್ರೂ ಅದು ಬೆಲೆಕಟ್ಟಲಾಗದ್ದಾಗಿರುತ್ತೆ. ನಿಜಾರ್ಥದಲ್ಲಿ ನೋಡಿದ್ರೆ ಅದೊಂದು ಕ್ಷುಲ್ಲಕ ವಿಚಾರ. ಆದ್ರೆ ಅಷ್ಟಕ್ಕೇ ಎಷ್ಟು ತಲೆಕೆಡಿಸಿಕೊಂಡುಬಿಡ್ತೇವಲ್ಲ...

ಸ್ನೇಹಿತ್ರೆ, ಲಕ್ಷ ಲಕ್ಷ ಜೀವಕೋಶಗಳ ವಿಶಿಷ್ಟ ಸಂಯೋಜನೆಯ ಈ ನಮ್ಮ ದೇಹ, ಅದರೊಳಗಿನ 'ಜೀವ' ನಿಜಕ್ಕೂ ನಮ್ಗೆ ದೊರೆತ ಅತ್ಯಂತ ದೊಡ್ಡ ಉಡುಗೊರೆ ಅಲ್ವಾ... ಅಗೋಚರ, ಅದ್ಭುತ ಶಕ್ತಿಯಿತ್ತ ಅತ್ಯದ್ಭುತ ಉಡುಗೊರೆಯಿದು. ಜೀವವೇ ಇಲ್ಲದ ಸಣ್ಣ ಸಣ್ಣ ವಸ್ತುಗಳ ಬಗ್ಗೆ ನಾವು ಅಷ್ಟು ಕಾಳಜಿ ತೋರಿಸ್ತೇವಂದ್ರೆ ಈ 'ಜೀವ'ಕ್ಕೆ ಇನ್ನೆಷ್ಟು ತೋರಿಸ್ಬೇಡ... ಯಾವುದೋ ಒಂದು ಹಂತದಲ್ಲಿ  ಏನೋ ಒಂದು ಹತಾಶೆಗೆ, ದುಃಖಕ್ಕೆ ನೊಂದುಕೊಂಡು ಜೀವವನ್ನೇ ಕಳ್ಕೊಳ್ಳೋದು ಎಷ್ಟು ಸರಿ..? ಕಳೆದುಹೋದ ವಸ್ತುಗಳು ಮತ್ತೆ ಸಿಕ್ಕೀತು... ಅಥವಾ ಅಂಥದ್ದೇ ಇನ್ನೊಂದನ್ನು, ಕೊಟ್ಟವರಿಂದ್ಲೇ ಮತ್ತೆ ಪಡೀಬಹುದು. ಆದ್ರೆ ಈ ಜೀವ, ಜೀವನ.... ಊಹೂಂ ಖಂಡಿತ ಮತ್ತೆ ಬರೊಲ್ಲ...

ಪರೀಕ್ಷೆಯಲ್ಲಿ ಫೇಲಾದೆ, ನನ್ನ ಆತ್ಮೀಯರು ನನ್ನ ತೊರೆದ್ರು, ನಂಗೆ ಬೇಕಾದ್ದು ಸಿಗ್ಲಿಲ್ಲ, ನಂಗೆ ಯಾರೋ ಬೈದ್ರು, ಯಾವುದೋ ಒಂದು ಕೆಲ್ಸ ಹೋಯ್ತು, ಅವಮಾನ ಆಯ್ತು - ಹೀಗೆ ಇಂಥ ಸಣ್ಣಪುಟ್ಟ ವಿಚಾರಗಳಿಗೆ ಜೀವಕ್ಕೇ ಎರವನ್ನು ತಂದುಕೊಳ್ಳೋದು ಸರೀನಾ... ಛೆ, ನಮ್ಮ ಈ 'ಜೀವ' ಅಷ್ಟು cheap ಆಗ್ಬಿಡ್ತಾ...? ಇಷ್ಟು ಸಣ್ಣ ವಿಚಾರಕ್ಕೆ ಆತ್ಮಹತ್ಯೆ ಮಾಡ್ಕೊಳ್ಳೋದಂದ್ರೆ ಈ ಆತ್ಮಕ್ಕೆ, ಈ ಜೀವಕ್ಕೆ ಏನೇನೂ ಬೆಲೆ ಇಲ್ಲ ಅಂದ ಹಾಗಾಯ್ತಲ್ಲ...

"ಸಾಕಾಗಿ ಹೋಯ್ತು...ಈ ಜೀವನವೇ ಬೇಡ" ಅಂತನ್ನಿಸೋ ಕ್ಷಣಗಳು ನೂರಾರು ಬರ್ಬಹುದು. ಆದ್ರೆ ಅದು ಕ್ಷಣಿಕ ಮಾತ್ರ. ಮರುದಿನ ಮತ್ತೊಂದು ಜೀವನಪ್ರೀತಿ ಮೊಳಕೆ ಒಡೆಯುತ್ತೆ. ಅಲ್ಲಿವರೆಗೆ ಜೀವಹಿಡಿದು ಕೂತ್ರೆ ಅಷ್ಟು ಸಾಕು. ಆಮೇಲೆ, "ಛೆ, ಎಂಥಾ ಕೆಟ್ಟ ಯೋಚ್ನೆ ಮಾಡಿದ್ದೆ.." ಅಂತನ್ನಿಸುತ್ತೆ.

ಯೋಚ್ನೆ ಮಾಡಿ, ನಿಮ್ಮವರನ್ನೂ ಯೋಚ್ನೆಗೆ ಹಚ್ಚಿ. ಬೇರೆ ಯಾವ ಪ್ರಾಣಿಗೂ ಸಿಕ್ಕದ ಅತಿಶ್ರೇಷ್ಠ ಉಡುಗೊರೆ ನಮ್ಗೆ ಸಿಕ್ಕಿದೆ. ಇರುವವರೆಗೆ, ಗಮ್ಯ ಕರೆವವರೆಗೆ ಅದನ್ನು ಕಾಪಾಡಿಕೊಂಡು, ಅದಕ್ಕೆ ನಾವೇ ಎರವಾಗದ ಹಾಗೆ 'ಜೀವಿಸು'ವುದು ಖಂಡಿತವಾಗಿ ನಮ್ಮ ಕರ್ತವ್ಯ. ಅಲ್ವ...

03 February 2010

ನಿಲ್ಲು ಸೋದರಿ...ಇಲ್ಲೊಮ್ಮೆ ಕೇಳು

[ಲವ್ ಜಿಹಾದೆಂಬ ಮಾಯಾವಿಯ ಹಿಂದೆ ಓಡಿಹೋಗುವ ಮುನ್ನ...]



 ಒಂಭತ್ತು ತಿಂಗಳು ಬಂದೆಲ್ಲ ನೋವನ್ನು ನುಂಗಿಕೊಂಡು, ತನ್ನ ಹೊಟ್ಟೆಯೊಳಗೆ ನಾಜೂಕಾಗಿ ನಿನ್ನ ರಕ್ಷಿಸಿ, ಮತ್ತೊಂದಷ್ಟು ನೋವನನುಭವಿಸಿ ಜನ್ಮನೀಡಿದಳು ಅಮ್ಮ. ಮತ್ತೆ ಮತ್ತಷ್ಟು ಪ್ರೀತಿ ವಾತ್ಸಲ್ಯದಿಂದೊಡಗೂಡಿದ ಸಮೃದ್ಧ ಪೋಷಣೆ ನೀಡಿ ಪಾಲಿಸಿದಳು ಅಮ್ಮ. ಅಷ್ಟೇ ಮಮತೆಯಿಂದ ಬೇಕಾದ್ದೆಲ್ಲ ತಂದುಕೊಟ್ಟು ಮಗಳು ಖುಷಿಯಾಗಿರ್ಲಿ ಅಂತ ನೋಡಿಕೊಂಡರು ಅಪ್ಪ. ಮಗಳು ತುಂಬಾ ಓದ್ಬೇಕು, ಸಮಾಜದಲ್ಲಿ ಒಳ್ಳೆ ಸ್ಥಾನ ಪಡೀಬೇಕು, ಸದಾ ಸಂತೋಷವಾಗಿರ್ಬೇಕು ಅಂತ ತಮ್ಮ ಜೀವ-ಜೀವನ ತೇದು ವಿದ್ಯೆ-ಬುದ್ಧಿ ನೀಡಿ ಬೆಳೆಸಿದ್ರು ಅದೇ ಅಪ್ಪ-ಅಮ್ಮ. ಇನ್ನೇನು ತಮ್ಮ ಶ್ರಮ ಸಾರ್ಥಕವಾಗ್ಬೇಕು, ಮಗಳಿಗೊಂದು ಉತ್ತಮ ಜೀವನ ರೂಪಿಸಿಕೊಡ್ಬೇಕು ಅಂತ ಹೊರಡ್ತಾ ಇರೋವಾಗ ಇದೆಂಥಾ ಬರಸಿಡಿಲು ಆ ಬಡಪಾಯಿಗಳ ಮೇಲೆ! ಈ ಅನುಬಂಧಗಳನ್ನೆಲ್ಲ ಕಡಿದುಕೊಂಡು ಅದ್ಯಾರೋ ಗೊತ್ತು ಗುರಿಯಿಲ್ಲದವನ ಹಿಂದೆ ನೀನು ಓಡಿಹೋದೆ ಅಂತ ಕೇಳಿದ್ರೆ ಆ ಹೃದಯಗಳಿಗೆ ಏನಾಗ್ಬೇಡ... ಅದೂ ಅಶಿಸ್ತಿನ ಪರಮಾವಧಿಯ, ನೀಚ, ತುಚ್ಛ, ಕಟುಕ, ಕೊಳಕು ಜನದ ಹಿಂದೆ... ಛಿ, ನಾಚಿಕೆಯಾಗೊಲ್ವ... ಎಲ್ಲಿ ಹೋಯ್ತು ನಮ್ಮ ಸಂಸ್ಕಾರ, ಸಂಸ್ಕೃತಿಯ ಪಾಠ? ಅದ್ಯಾವ ಅನಾಮಿಕ ಆಮಿಷ ನಿನ್ನ ಮನಸ್ಸನ್ನು ಸೆಳೆದುಕೊಂಡಿತು..? ಇಪ್ಪತ್ತು-ಇಪ್ಪತ್ತೆರಡು ವರ್ಷಗಳ ಕಾಲ ನಿನಗೆ ಒಂದಿನಿತು ಕಷ್ಟವಾಗದಂತೆ ಜೋಪಾನವಾಗಿ, ನಿನ್ನ ಖುಷಿಯಲ್ಲೇ ತಮ್ಮ ಖುಷಿ ಕಾಣುತ್ತಿದ್ದ ಹೆತ್ತವರು ಮಾಡಿದ ಪಾಪವಾದ್ರೂ ಏನು..? ಅವರಿಗ್ಯಾಕೆ ಇಂಥಾ ಘೋರ ಶಿಕ್ಷೆ? ಹೋಗೋ ಮೊದ್ಲು ಸ್ವಲ್ಪ ಯೋಚಿಸ್ಬೇಕಲ್ವ... ಮುಂದೆ ನಿನ್ನ ಮಗಳೂ ಹೀಗೇ ಮಾಡಿದ್ರೆ ಹೇಗಾದೀತು..? ಒಮ್ಮೆ ಕಲ್ಪಿಸ್ಕೋ ಪ್ಲೀಸ್...

ಫಾರಿನ್ ಸೆಂಟಿನ ಪರಿಮಳದ ಹಿಂದಿರುವ ನರಕದ ಬಗೆಗೆ ತಿಳಿದುಕೊಳ್ಳುವಷ್ಟು ಪ್ರಜ್ಞೆ ನಿನ್ನಲ್ಲಿದೆ ತಾನೆ..? ಡುರ್ರೆ೦ದು ಬರುವ ಯಾರದೋ ಬಾಡಿಗೆ ಮೋಟರ್ ಸೈಕಲ್ ಮೇಲೆ ನಿನ್ನ ಜೀವನ ಅದೆಷ್ಟು ದಿನ ಸುಗಮವಾಗಿ ಸಾಗೀತು..? ಮನೆ ತಲುಪೋವಾಗ ಎಷ್ಟೇ ತಡವಾದ್ರೂ ನಿನ್ ಜೊತೇನೇ ಊಟ ಮಾಡೋಕಂತ ಕಾಯ್ತಿದ್ದ ಅಮ್ಮ ಈಗ ಏನ್ ಮಾಡ್ಬೇಕು..? ನಿನ್ನ ಕಾಣದ ಅವಳಿಗೆ ಒಂದು ತುತ್ತಾದ್ರೂ ಊಟ ಸೇರೀತಾ..? ಮಗಳ ಮದುವೆಗೇಂತ ಕಷ್ಟಪಟ್ಟು ಎಷ್ಟೋ ವರ್ಷಗಳಿಂದ ಬೆವರಿಳಿಸಿ ಸಂಪಾದಿಸಿ ಹಣ ಕೂಡಿಟ್ಟ ಅಪ್ಪನಿಗೆ ಇನ್ಯಾವ ಸಂಭ್ರಮವಿದೆ..?

ಪ್ಲೀಸ್...ಒಂದೇ ಒಂದ್ಸಲ ಮನಸ್ಸಿಟ್ಟು ಆಲೋಚಿಸು. ನಿಜವಾದ ಪ್ರೀತಿ ಯಾವುದು... 'ಆಕರ್ಷಣೆ'ಯ ಬೆಂಬತ್ತಿ ಹೋಗಿ ಅಮೂಲ್ಯ ಜೀವನ ಹಾಳುಮಾಡಿಕೊಳ್ತೀಯಾ... ಅಥವಾ ನಿಜವಾದ ಪ್ರೀತಿಯೊಂದಿಗಿದ್ದು, ಇಷ್ಟು ವರ್ಷ ಸಲಹಿದ್ದಕ್ಕಾಗಿ ಅವರನ್ನು ಚಂದದಿಂದ ನೋಡಿಕೊಂಡು ಜೀವನಸಾರ್ಥಕತೆಯನ್ನು ಪಡ್ಕೊಳ್ತೀಯಾ...
ನಿಲ್ಲು ಸೋದರಿ...ಇಲ್ಲೊಮ್ಮೆ ಕೇಳು...

26 January 2010

ಬದಲಾವಣೆಯೊಂದಿಗೆ ಬದಲಾಗುತ್ತಾ...



ನಿತ್ಯ ಬರುವ ನಾಕಾರು forwarded ಮೆಸೇಜ್‌ಗಳು ಮನಸ್ಸಿಗೆ ಒಂದಷ್ಟು ಖುಷಿ, ನೆಮ್ಮದಿ ನೀಡ್ತವೆ. ಕೆಲವೊಂದಂತೂ ಮನಸ್ಸಿಗೆ ನಾಟಿ, ಹೊಸ ಉತ್ಸಾಹ ನೀಡ್ತವೆ, ಹೊಸ ಪ್ರೇರಣೆ ಕೊಡ್ತವೆ. ಹೀಗೇ ಗೆಳತಿಯೊಬ್ಬಳು ಕಳಿಸಿದ sms:
"Nothing can be changed by changing the face.. but, everything can be changed by facing the change."

ಹೌದಲ್ಲ! ಜೀವನದಲ್ಲಿ ಬದಲಾವಣೆಗಳು ಬಂದಾಗ ಒಮ್ಮೆಗೇ ಅದನ್ನು ಎದುರಿಸೋದಕ್ಕೆ ಮನಸ್ಸೇಕೋ ಹಿಂಜರಿಯುತ್ತೆ. ಯಾಕೆಂದ್ರೆ ನಾವು ಒಂದು mindsetಗೆ ಅಂಟಿಕೊಂಡಿರ್ತೇವೆ. ಅದು ಹಾಗೇನೇ ಆಗ್ಬೇಕು ಅಂತ ಬಲವಾಗಿ ಅಂದುಕೊಂಡಿರ್ತೇವೆ. ಹೀಗಿರೋವಾಗ ಏನಾದ್ರೂ ಸ್ವಲ್ಪ ಏರುಪೇರಾದ್ರೂ ವಿಪರೀತ ಪೇಚಾಡ್ತೇವೆ. ಆ ಬದಲಾವಣೆಗೆ ಹೊಂದಿಕೊಳ್ಳೋದಕ್ಕೆ ತುಂಬಾ ಕಷ್ಟವಾಗಿಬಿಡುತ್ತೆ. ಬೇಸರಮಾಡಿಕೊಂಡು ಮುಖಬಾಡಿಸಿಕೊಂಡು ಕೂತ್ರೆ ಏನು ಪ್ರಯೋಜನ?

ಅದ್ರ ಬದ್ಲು, ಬಂದ ಬದಲಾವಣೆಗೆ ಹೊಂದಿಕೊಂಡು ಅದಕ್ಕನುಗುಣವಾಗಿಯೇ ನಡ್ಕೊಂಡ್ರೆ ಆ ಬದಲಾವಣೆಯಲ್ಲೂ ಬದಲಾವಣೆ ತರ್ಬಹುದು. ಒಮ್ಮೆಗೇ ಆ ರೀತಿ ಬದಲಾಗುವುದು ಸ್ವಲ್ಪ ಕಷ್ಟವಾದೀತು. ಆದ್ರೂ ಪ್ರಯತ್ನಿಸ್ಬಹುದಲ್ವಾ..?

11 January 2010

ಸಂಬಂಧಗಳು...



ಈ ಸಂಬಂಧಗಳು ಅದೆಷ್ಟು ಸೂಕ್ಷ್ಮ!  ಸಣ್ಣ ರೇಷ್ಮೆ ಎಳೆಯಂತೆ.  ಒಂದೊಂದು ಎಳೆಯೂ ಅಷ್ಟೇ ಪ್ರಮುಖವೆನಿಸುತ್ತದೆ.  ಎಲ್ಲವೂ ಜೊತೆಸೇರಿ ಜೀವನದ ಹಂದರ ತಾನೆ?  ಬಿಗಿಯಾದರೆ ಅದೊಂದು ರೀತಿಯ ಚಡಪಡಿಕೆ.  ಇನ್ನು, ಸಡಿಲವಾಗಿ ಒಂದು ಎಳೆ ಕಡಿದು ಹೋದರೂ ಬಾಳೇ ನಶ್ವರವೇನೋ ಎಂಬ ಭಾವ.

ಸಂಬಂಧದ ಬಳ್ಳಿ ಕೇವಲ ಹುಟ್ಟಿನಿಂದ ಸುತ್ತಿಕೊಂಡು ಬಂದದ್ದು ಮಾತ್ರವಲ್ಲ.  ಜೀವನದ ಹಲವು ಹಂತಗಳಲ್ಲಿ ಬೆಸೆದುಕೊಂಡದ್ದೂ ಇರಬಹುದು.  ಕೆಲವೊಂದು ಬಾರಿ ರಕ್ತಸಂಬಂಧಿಗಳಲ್ಲಿರದಷ್ಟು ಪ್ರೀತಿ, ಮಮಕಾರ ಈ ಬಂಧುಗಳಲ್ಲಿ ಹೊಸೆದುಕೊಂಡಿರುತ್ತದೆ.  ಅವರೊಂದಿಗಿನ ಒಡನಾಟ ಒಡಹುಟ್ಟಿದವರಿಗಿಂತಲೂ ಹೆಚ್ಚು ಆತ್ಮೀಯತೆಯಿಂದಿರುತ್ತದೆ.  ಹೀಗಿರುವಾಗ, ಒಂದು ಸಣ್ಣ ವೈಮನಸ್ಸು ಮೂಡಿಬಿಟ್ಟರೆ, ಬದುಕನ್ನೇ ಕೊಚ್ಚಿಕೊಂಡು ಹೋಗುವಂಥ ದುಃಖ ಉಕ್ಕುಕ್ಕಿ ಬರುತ್ತದೆ.  ಅಂಥ ಸೆಳೆತವಿರುತ್ತದೆ ಅಲ್ಲಿ.

ಸಂಬಂಧಗಳನ್ನು ಮೊದಲಿನಿಂದ ಕೊನೆವರೆಗೂ ಜೋಪಾನವಾಗಿ, ಹಾಳಾಗದಂತೆ ನೋಡಿಕೊಳ್ಳುವುದೂ ಒಂದು ಕಲೆ.  ನೆಮ್ಮದಿಯ ಜೀವನಕ್ಕೆ ಅತೀ ಅಗತ್ಯವದು.  ಎಲ್ಲವನ್ನೂ ಸಮರ್ಥವಾಗಿ ನಿಭಾಯಿಸುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕು.  ಅಣ್ಣನೊಂದಿಗಿನ ಬಾಂಧವ್ಯ, ತಮ್ಮನಿಗೆ ಬೇಸರ ತರಿಸುವಂತಿರಬಾರದು.  ನಮಗೆ ಎಲ್ಲರೂ ಬೇಕು ತಾನೆ?  ಹಾಗೆಯೇ ಅವರಿಗೂ ಕೂಡ.  ನಮ್ಮ ಒಂದು ಅನುಬಂಧ, ಇನ್ನೊಂದರ ಮನನೋಯಿಸುವಂತಿರಬಾರದು.  ಅವರು ನಮ್ಮ ಬಗ್ಗೆ ಗಮನಕೊಡದೇ ಇದ್ದಾಗ ನಮಗದೆಷ್ಟು ಬೇಸರವುಂಟಾಗುವುದೋ, ಅಷ್ಟೇ ಬೇಸರ ನಮ್ಮ ವೈಮನಸ್ಸಿನಿಂದಾಗಿ ಅವರಿಗೂ ಆದೀತು.  ಅವರು ನಮ್ಮವರು, ನಮ್ಮಂತೆಯೇ ಎಂಬ ಭಾವನೆ ನಮ್ಮಲ್ಲಿರಬೇಕು.  ಅದಕ್ಕೆ ತಕ್ಕಂತೆ ನಡೆದುಕೊಳ್ಳಲೂಬೇಕು.
ಇನ್ನೊಬ್ಬರಿಂದ ತಪ್ಪಾದಾಗ, ಮುನಿಸಿಕೊಂಡು ಮಾತುಬಿಟ್ಟು ಕೂತರೆ ಅದರಿಂದ ನಮಗೇ ತಾನೆ ನಷ್ಟ?  ಅವರೇ ಬಂದು ಕ್ಷಮೆ ಕೇಳಲಿ. . . ಎಂದು ಅಹಂ ಭಾವದಿಂದ ವರ್ತಿಸುವುದು ಮತ್ತೂ ದೊಡ್ಡ ತಪ್ಪೆನಿಸುವುದು.  ಒಂದು ಮಂದಹಾಸ ಬೀರುತ್ತಾ, ಪ್ರೀತಿಯಿಂದ, ಏನಾದರೂ ಸಮಸ್ಯೆ ಇದೆಯಾ. . . . ಅಂತೊಂದು ಮಾತು ಕೇಳಿದರೆ ಸಾಕು.  ಇನ್ನೇನು ಕೊನೆಗಾಣುವ ಸ್ಥಿತಿಯಲ್ಲಿದ್ದ ಸಂಬಂಧ, ಚಿಗುರಿಕೊಂಡು ಮತ್ತಷ್ಟು ಗಾಢವಾಗಿಬಿಡುತ್ತದೆ.  ಒಟ್ಟಿನಲ್ಲಿ ಸಂಬಂಧಗಳನ್ನು ಉಳಿಸಿಕೊಳ್ಳುವುದು ಅಥವಾ ಅಳಿಸಿಕೊಳ್ಳುವುದು ನಮ್ಮ ಕೈಯಲ್ಲೇ ಇದೆ.